February 3, 2026

ಸುಳ್ಯ: ಬಾಂಜಿಕೋಡಿ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆ

0
IMG-20220102-WA0010

ಸುಳ್ಯ: ಐವರ್ನಾಡು ಗ್ರಾಮದ ಬಾಂಜಿಕೋಡಿಯಲ್ಲಿ ಬಾವಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ.

ಮೃತ ದೇಹವು ಬಾಂಜಿಕೋಡಿ ನಿವಾಸಿ ದಿವಂಗತ ಮಾಧವ ರವರ ಪುತ್ರ ಅರುಣ್ ಕುಮಾರ್ ಬಾಂಜಿಕೋಡಿಯವರದ್ದೆಂದು ಗುರುತಿಸಲಾಗಿದ್ದು, ಇವರು ಡಿ.31 ರಿಂದ ಮನೆಯಿಂದ ಕಾಣೆಯಾಗಿದ್ದರೆನ್ನಲಾಗಿದೆ. ಕಳೆದ ಎರಡು ದಿನಗಳಿಂದ ಸ್ಥಳೀಯರು ಮತ್ತು ಕುಟುಂಬಸ್ಥರು ಇವರನ್ನು ಹುಡುಕಾಟದಲ್ಲಿ ತೊಡಗಿಕೊಂಡಿದ್ದರು. ಆದರೆ ಇಂದು ಮುಂಜಾನೆ ರವಿಕುಮಾರ್ ರವರ ಮನೆಯ ಮುಂಭಾಗದಲ್ಲಿರುವ ಬಾವಿಯಲ್ಲಿ ಇವರ ಮೃತದೇಹ ಕುಟುಂಬಸ್ಥರಿಗೆ ಒಬ್ಬರಿಗೆ ಕಂಡಿರುತ್ತದೆ.

ಅರುಣ್ ಕುಮಾರ್ ರವರು ಉಪ್ಪಿನಂಗಡಿಯಲ್ಲಿ ಫ್ಯಾಕ್ಟರಿಯೊಂದರಲ್ಲಿ ಮಾಸ್ಟರ್ ಪ್ಲಾನ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಮೃತ ಅರುಣ್ ಕುಮಾರ್ ತಾಯಿ ವಿಮಲಾ ಪತ್ನಿ ವನಜ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!