ಮಡಿಕೇರಿ: ಕಾರು-ಬಸ್ ನಡುವೆ ಭೀಕರ ಅಪಘಾತ:
ಮೂವರು ಸ್ಥಳದಲ್ಲೇ ಮೃತ್ಯು-ಐದು ಮಂದಿ ಗಂಭೀರ
ನಾಗಮಂಗಲ : ಬಸ್ಸು ಹಾಗೂ ಕಾರಿನ ಮಧ್ಯೆ ನಾಗಮಂಗಲ ಸಮೀಪದ ಕೆಂಪನಕೊಪ್ಪಲು ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೊಡಗು ಮೂಲದ ನವ ದಂಪತಿಗಳ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟ ಹಾಗೂ ಆರು ಮಂದಿ ಗಾಯಗೊಂಡ ಘಟನೆ ಜ. 2 ರಂದು ನಡೆದಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕೆಂಪನಕೊಪ್ಪಲು ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದೆ.
ಕಾರಿನಲ್ಲಿದ್ದ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಕುಂದಳ್ಳಿ ಗ್ರಾಮದ ಸುದೀಪ್(35), ಶ್ರೀಜಾ(30) ಹಾಗೂ ತಂಗಮ್ಮ (55) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಇನ್ನೊಬ್ಬ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೇ ಬಸ್ ಚಾಲಕ ಹಾಗೂ ಬಸ್ ನಲ್ಲಿದ್ದ ಇತರ ನಾಲ್ವರು ಕೂಡ ಗಾಯಗೊಂಡಿದ್ದಾರೆ.





