ಸರ್ಕಾರಿ ಜಾಗದಲ್ಲಿದ್ದ ಶಿಲುಬೆ ತೆರವಿಗೆ ಯತ್ನ: ಪೊಲೀಸರು ಮತ್ತು ಬಜರಂಗದಳ ಕಾರ್ಯಕರ್ತರ ನಡುವೆ ವಾಗ್ವಾದ
ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕರಗುಂದದಲ್ಲಿ ಸರ್ಕಾರಿ ಜಾಗದಲ್ಲಿದ್ದ ಶಿಲುಬೆ ತೆರವಿಗೆ ಯತ್ನಿಸಿದ ವೇಳೆ ಪೊಲೀಸರು, ಬಜರಂಗದಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.
ಎನ್.ಆರ್.ಪುರ ತಾಲೂಕಿನ ಉಮಾಮಹೇಶ್ವರ ದೇವಸ್ಥಾನದ ಬಳಿ ಬುಧವಾರ ಘಟನೆ ನಡೆದಿದ್ದು, ಬಜರಂಗದಳ ಕರಗುಂದ ಚಲೋಗೆ ಕರೆ ನೀಡಿತ್ತು.
ಬಜರಂಗದಳದ ಪ್ರಾಂತ್ಯ ಸಂಚಾಲಕ ರಘು ಸೇರಿ, ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ತಳ್ಳಾಟ-ನೂಕಾಟ ನಡೆದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.