ಸುಳ್ಯ: ಉಬರಡ್ಕ ಹೊಳೆಯಲ್ಲಿ ಸ್ನಾನಕ್ಕಿಳಿದ ವ್ಯಕ್ತಿ ಮುಳುಗಿ ಮೃತ್ಯು
ಸುಳ್ಯ: ಉಬರಡ್ಕ ಗ್ರಾಮದ ಕುತ್ತಮೊಟ್ಟೆ ನಿವಾಸಿ ರಾಮ 63 ವರ್ಷ ಎಂಬವರು ಹೊಳೆಯಲ್ಲಿ ಸ್ಥಾನಕ್ಕಿಳಿದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅ.24 ರಂದು ವರದಿಯಾಗಿದೆ.
ರಾಮ ತಮ್ಮ ಮನೆಯ ಪಕ್ಕದಲ್ಲಿರುವ ಹೊಳೆಗೆ ನಿನ್ನೆ ಸಂಜೆ ಸ್ಥಾನಕ್ಕೆಂದು ತೆರಳಿದ್ದರು ಎನ್ನಲಾಗಿದೆ. ಅವರು ವಾಪಸು ಬಾರದೆ ಇದ್ದಾಗ ಮನೆಯವರು ಅವರನ್ನು ಹುಡುಕಾಡಿದಾಗ ಹೊಳೆಯಲ್ಲಿ ಮೃತಪಟ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ.
ಸುಳ್ಯ ಪೋಲಿಸರು ಸ್ಥಳಕ್ಕೆ ದಾವಿಸಿ ಮಹಜರು ಮಾಡಿ ಸರಕಾರಿ ಆಸ್ಪತ್ರೆ ತಂದು ಶವಪರೀಕ್ಷೆ ನಡೆಸಿದ್ದಾರೆ.




