ಬಿಜೆಪಿ ಪ್ರತಿಭಟನಾ ಸ್ಥಳದಲ್ಲಿ ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ ನಡೆಸಿ, ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯ
ಜಾರ್ಖಂಡ್: ಶಂಕಿತ ಬಿಜೆಪಿ ಕಾರ್ಯಕರ್ತರು ವ್ಯಕ್ತಿಯೊಬ್ಬನನ್ನು ಥಳಿಸಿ, ಬಲವಂತವಾಗಿ ಎಂಜಲು ನೆಕ್ಕಿಸಿ, ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಒತ್ತಾಯಿಸಿದ ಘಟನೆ ಜಾರ್ಖಂಡ್ನ ಧನ್ಬಾದ್ನಲ್ಲಿ ನಡೆದಿದೆ.
ಪ್ರತಿಭಟನೆಯ ವೇಳೆ ಥಳಿತಕ್ಕೊಳಗಾದ ವ್ಯಕ್ತಿ ಪ್ರಧಾನಿ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷರನ್ನು ನಿಂದಿಸಿದ್ದಾರೆ ಎಂದು ಬಿಜೆಪಿಯ ಹಿರಿಯ ಮುಖಂಡರು ಹೇಳಿದ್ದಾರೆ.
ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.




