ವಿರಾಟ್ ಕೊಹ್ಲಿ ಅಹಂ ಬಿಟ್ಟು ಹೊಸ ನಾಯಕನ ಅಡಿಯಲ್ಲಿ ಆಡಬೇಕು: ಕಪಿಲ್ ದೇವ್
ನವದೆಹಲಿ: ಅಹಂ ಬಿಟ್ಟು ವಿರಾಟ್ ಕೊಹ್ಲಿ ತಂಡದ ಹೊಸ ನಾಯಕನನ್ನು ಬೆಂಬಲಿಸಬೇಕು ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಕ್ರಿಕೆಟ್ ದಂತಕಥೆ ಕಪಿಲ್ ದೇವ್ ಹೇಳಿದ್ದಾರೆ.
ವಿರಾಟ್ ಕೊಹ್ಲಿ ಶನಿವಾರ ಭಾರತ ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದು, ಕೊಹ್ಲಿ ಕೇವಲ ಟೆಸ್ಟ್ ತಂಡದ ನಾಯಕರಾಗಿದ್ದರು. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಬಳಿಕ ಕೊಹ್ಲಿ ಭಾರತ ತಂಡದ ಸಾರಥ್ಯ ತೊರೆದಿದ್ದಾರೆ.
ವಿರಾಟ್ ಕೊಹ್ಲಿ ನಾಯಕತ್ವಕ್ಕ ಗುಡ್ ಬೈ ಹೇಳಿದ ಬಳಿಕ, ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಕಠಿಣ ಶಬ್ದಗಳಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕೊಹ್ಲಿ ಅಹಂ ಬಿಟ್ಟು ಹೊಸ ನಾಯಕನ ಅಡಿಯಲ್ಲಿ ಆಡಬೇಕಾಗುತ್ತದೆ ಎಂದಿದ್ದಾರೆ.




