ನೆಲ್ಯಾಡಿ: ಚಲಿಸುತ್ತಿದ್ದ ಬೈಕ್ ನ ಮೇಲೆ ಮರಬಿದ್ದು ಸವಾರನಿಗೆ ಗಾಯ
ನೆಲ್ಯಾಡಿ: ಚಲಿಸುತ್ತಿದ್ದ ಬೈಕ್ ನ ಮೇಲೆ ಮರ ಬಿದ್ದ ಪರಿಣಾಮ ಸವಾರ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾದ ಘಟನೆ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಸೋಮವಾರದಂದು ಬೆಳಗ್ಗೆ ನಡೆದಿದೆ.
ಗಾಯಗೊಂಡ ಸವಾರನನ್ನು ಕಾಸರಗೋಡು ನಿವಾಸಿ ಪವನ್ ಎಂದು ಗುರುತಿಸಲಾಗಿದೆ.
ಹಾಸನದ ಖಾಸಗಿ ಕಂಪನಿಯೊಂದರಲ್ಲಿ ಮೆನೇಜರ್ ಆಗಿದ್ದ ಇವರು, ಇಂದು ಬೆಳಗ್ಗೆ ಕಾಸರಗೋಡಿನಿಂದ ಹಾಸನಕ್ಕೆ ತೆರಳುತ್ತಿದ್ದ ವೇಳೆ ಅಡ್ಡಹೊಳೆ ತಲುಪುತ್ತಿದ್ದಂತೆಯೇ ದೂಪದ ಮರವೊಂದು ಬೈಕಿನ ಹಿಂಬದಿಗೆ ಬಿದ್ದಿದೆ.





