ಬಾಬರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿಯನ್ನೂ ಒಡೆಯಬೇಕು: ಕಾಳಿಮಠದ ಋಷಿಕುಮಾರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ
ಶ್ರೀರಂಗಪಟ್ಟಣ: ಬಾಬರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿಯನ್ನೂ ಒಡೆಯಬೇಕು ಎಂದು ಕಾಳಿಮಠದ ಋಷಿಕುಮಾರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಮಾಡಿ ಹಾಕಿರುವ ಸ್ವಾಮೀಜಿ, ವಿವಾದಕ್ಕೆ ಸಿಲುಕಿದ್ದಾರೆ.
“ಈ ಮಸೀದಿಯಲ್ಲಿ ಅದ್ಬುತವಾದ ಶಿಲೆಗಳಿದೆ. ಅದು ದೇವಸ್ಥಾನದ ಕಟ್ಟಡವಾಗಿದೆ. ಶ್ರೀರಂಗಪಟ್ಟಣದ ದೇವಾಸ್ಥಾನವನ್ನು ಮಸೀದಿ ಮಾಡಿಕೊಂಡಿದ್ದಾರೆ. ಹಿಂದೂಗಳು ಜಾಗರೂಕರಾಗಿ. ಅತಿಬೇಗ ಒಡೆಯಬೇಕಾದ ಮಸೀದಿ ಇದು” ಎಂದು ಸಾಮಾಜಿಕ ಜಾಲತಾಣದಲ್ಲಿ ಋಷಿಕುಮಾರ ಹೇಳಿಕೊಂಡಿದ್ದಾರೆ.




