ನಾನು ಮಾಸ್ಕ್ ಧರಿಸುವುದಿಲ್ಲ: ಉದ್ಧಟತನದ ಹೇಳಿಕೆ ನೀಡಿದ ಉಮೇಶ್ ಕತ್ತಿ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸರ್ಕಾರ ನುರಿತ ತಜ್ಞರ ಜತೆ ಮಾಹಿತಿ ಪಡೆದು ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿದೆ. ಆದರೆ, ಸಚಿವರಾಗಿರುವ ಉಮೇಶ್ ಕತ್ತಿಯವರು ಮಾಸ್ಕ್ ಧರಿವುದಿಲ್ಲ ಎಂದು ಹೇಳುವ ಮೂಲಕ ಉದ್ಧಟತನ ಮೆರೆದಿದ್ದಾರೆ.
ಅಥಣಿ ಪಟ್ಟಣದಲ್ಲಿ ಲಕ್ಷ್ಮೀ ಸಸ್ಯೋದ್ಯಾನ ಉದ್ಘಾಟನೆ ನೆರವೇರಿಸಿದ ಬಳಿಕ ಮಾತನಾಡಿದ ಉಮೇಶ್ ಕತ್ತಿಯವರು, ಕೇಂದ್ರ ಸರ್ಕಾರ ಕೊರೋನಾ ನಿಯಮಗಳಲ್ಲಿ ಕೆಲವನ್ನು ಸಡಿಲಿಕೆ ಮಾಡಿದೆ. ಕಳೆದ ಎರಡು ದಿನದ ಹಿಂದೆ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಸ್ಕ್ ಧರಿಸುವುದು ಬಿಡುವುದು ಅವರವರ ಭಾವಕ್ಕೆ ಬಿಟ್ಟಿದ್ದು ಎಂದು ಹೇಳಿದ್ದಾರೆ. ಹೀಗಾಗಿ ನಾನು ಮಾಸ್ಕ್ ಧರಿಸುತ್ತಿಲ್ಲ ಎಂದು ಹೇಳಿದರು.




