February 1, 2026

ಕೆದಿಲ: ಅನ್ಯಕೋಮಿನ ಯುವಕರ ನಡುವೆ ಹೊಡೆದಾಟ: ಲಘು ಲಾಠಿಪ್ರಹಾರ ನಡೆಸಿದ ಪೊಲೀಸರು

0
IMG_20220119_110907.jpg

ಪುತ್ತೂರು: ಅನ್ಯಕೋಮಿನ ಯುವಕರ ಮಧ್ಯೆ ಮಾತಿನ ಚಕಮಕಿ ಮತ್ತು ಪರಸ್ಪರ ಹಲ್ಲೆ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಲಘು ಲಾಠಿಪ್ರಹಾರದ ಮೂಲಕ ಗುಂಪು ಚದುರಿಸಿದ ಘಟನೆ ಕೆದಿಲ ಗ್ರಾಮದ ಗಡಿಯಾರದಲ್ಲಿ ತಡರಾತ್ರಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಬಂಧಿತರನ್ನು ಗಡಿಯಾರದ ಸತ್ತಿಕಲ್ಲು ನಿವಾಸಿ ರಷ್ಪಕ್, ಪೆರ್ನೆ ನಿವಾಸಿಗಳಾದ ಹರ್ಷಿತ್, ಸತೀಶ್, ಜಗದೀಶ್ ಎನ್ನಲಾಗಿದೆ.

ಅನ್ಯಕೋಮಿನ ಯುವಕರ ನಡುವೆ ಮಾತಿನ ಚಕಮಕಿ ನಡೆದು ಹಲ್ಲೆ ನಡೆದಾಗ ಪೊಲೀಸರು ಸ್ಥಳಕ್ಕಾಗಮಿಸಿ ಗುಂಪು ಚದುರಿಸಿದ್ದು, ಈ ವೇಳೆ ಪೊಲೀಸರೊಂದಿಗೂ ಮಾತಿನ ಚಕಮಕಿ ನಡೆದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆನ್ನಲಾಗಿದೆ.

ಈ ವೇಳೆ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಅವರ ವಿರುದ್ದ ಸಾರ್ವಜನಿಕ ಶಾಂತಿ ಭಂಗ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!