ಪತ್ನಿಯ ಐಶಾರಾಮಿ ಜೀವನಕ್ಕೆ ಬೇಸತ್ತು ಪತಿ ನೇಣು ಬಿಗಿದು ಆತ್ಮಹತ್ಯೆ
ಬೆಂಗಳೂರು: ದುಬಾರಿ ಬೆಲೆಯ ಬಟ್ಟೆ ಖರೀದಿ ಸೇರಿದಂತೆ ಪತ್ನಿಯ ಐಶಾರಾಮಿ ಜೀವನಕ್ಕೆ ಬೇಸತ್ತು ಪತಿ ನೇಣಿಗೆ ಶರಣಾಗಿರುವ ಘಟನೆ ಬಸವೇಶ್ವರನಗರ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ನಡೆದಿದೆ.
ಮೆಕಾನಿಕ್ ಕೆಲಸ ಮಾಡುತ್ತಿದ್ದ ಚಾಂದ್ಪಾಷಾ (31) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.
ಕೌಟುಂಬಿಕ ಕಲಹ ದಿಂದ ಮೊದಲ ಪತ್ನಿಯಿಂದ ದೂರವಾಗಿದ್ದರು. ಆ ಹಿನ್ನೆಲೆ ಚಾಂದ್ ಪಾಷಾ ಕಳೆದ 4 ತಿಂಗಳ ಹಿಂದಷ್ಟೇ ಉಸ್ಮಾ (26) ಎಂಬಾಕೆಯನ್ನು ಮದುವೆಯಾಗಿದ್ದ. ಚಾಂದ್ ಪಾಷಾ ಪತ್ನಿ ಉಸ್ಮಾಗೆ ಐಷಾರಾಮಿ ಜೀವನದ ಗೀಳಿತ್ತು. ಆ ಹಿನ್ನೆಲೆ ಯಲ್ಲಿಯೇ ದುಬಾರಿ ಬಟ್ಟೆ ಧರಿಸುವುದು. ಚಿನ್ನಾಭರಣ ಖರೀದಿಸುವುದು, ಪ್ರತಿನಿತ್ಯ ಹೊರಗೆ ಸುತ್ತಾಡಿ ಐಶಾರಾಮಿ ಜೀವನ ನಡೆಸುವ ಅಭಿಲಾಷೆಯನ್ನು ಪತಿಯ ಜತೆ ವ್ಯಕ್ತಪಡಿಸುತ್ತಿದ್ದಳು.




